ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಆರನೇ ತಿರುವಿನಲ್ಲಿ ಶುಕ್ರವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.

ಇಂದು ಮಧ್ಯಾಹ್ನ ವೇಳೆಗೆ ಮರ ತೆರವು ಗೊಳಿಸಲಾಗುವುದೆಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಇದೆ ವೇಳೆ ಪಿಕಪ್ ವಾಹನದ ಮೇಲೆ ಮರ ಬಿದ್ದು ವಾಹನದಲ್ಲಿದ್ದ ಓರ್ವನಿಗೆ ಪೆಟ್ಟಾಗಿದ್ದು ಆತನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ.
