ಮೂಡಿಗೆರೆ: ತಾಲೂಕಿನ ಬಾಳೂರು ಹೋಬಳಿಯ ಸುಂದರ್ ಬೈಲ್ ಬಳಿ ಅಪರಿಚಿತ ವಾಹನವು ಕಡವೆಗೆ ಡಿಕ್ಕಿ ಹೊಡೆದಿದೆ.
ಹೌದು .. ಅಪರಿಚಿತ ವಾಹನವು ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡಿದ್ದು ತಕ್ಷಣ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಸ್ತು ಅರಣ್ಯ ಪಾಲಕರಾದ ಅಭಿಜಿತ್ ಶಂಕರ್ ನವೀನ್ ಹಾಗೂ ಪಶು ಆಸ್ಪತ್ರೆಯ ವೈದ್ಯರಾದ ನವೀನ್ ಕೂಡ ಸ್ಥಳಕ್ಕೆ ಆಗಮಿಸಿ ಗಾಯಗೊಂಡಿದ್ದ ಕಡವೆಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಕಡವೆಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅದಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕ್ರಮತೆಗೆದುಕೊಳ್ಳಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
