ಚಿಕ್ಕಮಗಳೂರು: ಸಾಲಭಾದೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಹೌದು .. ಹೊಸಳ್ಳಿ ತಾಂಡ್ಯದ ಹನುಮಂತ ನಾಯ್ಕ್ (41) ಆತ್ಮಹತ್ಯೆ ಮಾಡಿಕೊಂಡಿದ್ದ ರೈತನಾಗಿರುತ್ತಾನೆ.
ಹನುಮಂತ ಬ್ಯಾಂಕಿನಲ್ಲಿ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಮರುಪಾವತಿ ವಿಳಂಬವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ಜಮೀನನ್ನು ಹರಾಜು ಹಾಕುತ್ತೇವೆ ಎಂದಿದ್ದರು . ಇದರಿಂದ ಮನನೊಂದು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಪ್ರಕರಣ ಸಂಬಂಧ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಬ್ಯಾಂಕ್ ಅಧಿಕಾರಿಗಳ ಒತ್ತಡಕ್ಕೆ ರೈತನ ಪ್ರಾಣ ಕಳೆದುಕೊಂಡಿದ್ದರ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

