Saturday, August 8, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಅಡಕೆ ತೋಟಗಳನ್ನ ಹಾಳು ಮಾಡಿದ ಕಾಡಾನೆಗಳು: ರೈತರು ಕಂಗಾಲು!

ಚಿಕ್ಕಮಗಳೂರು: ಅಡಕೆ ತೋಟಗಳನ್ನ ಹಾಳು ಮಾಡಿದ ಕಾಡಾನೆಗಳು: ರೈತರು ಕಂಗಾಲು!

Telegram Group
Join Now

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ತೋಟದ ಮಾಲೀಕರಾದ ಕರಗಣೆ ಗ್ರಾಮದ ನವೀನ್ ಹಾಗೂ ಶಂಕ್ರೆಗೌಡ ಎಂಬುವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು ಅಡಕೆ, ಕಾಫಿಗಿಡಗಳನ್ನು ಸಂಪೂರ್ಣ ನಾಶ ಮಾಡಿವೆ. ಅಡಕೆ ಮರಗಳನ್ನು ಬುಡ ಸಮೇತ ಉರುಳಿಸಿ ಸಿಗಿದು ಹಾಕಿವೆ. ಫಸಲಿಗೆ ಬಂದ ಮರಗಳನ್ನು ಈ ರೀತಿ ಮುರಿದು ಹಾಕಿರುವುದರಿಂದ ಬೆಳೆಗಾರಿಗೆ ದಿಕ್ಕೇ ತೋಚದಂತಾಗಿದ್ದು, ಅರಣ್ಯ ಇಲಾಖೆಯೂ ಆನೆಗಳನ್ನು ಓಡಿಸದೆ ಕೈ ಕಟ್ಟಿ ಕುಳಿತಿದೆ ಎಂದು ರೈತರು ಆರೋಪಿಸಿದ್ದಾರೆ.

ಈ ಕುರಿತು ಸರ್ಕಾರ ಬೆಳೆ ಹಾನಿಗೆ ನೀಡುವ ಪರಿಹಾರ ಕೇವಲ ಆನೆ ಹೊಟ್ಟೆಯನ್ನು ತುಂಬಿಸಲು ಕೂಡ ಆಗುವುದಿಲ್ಲ, ಎಂದು ಟೀಕಿಸುವ ಮೂಲಕ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ಆನೆಗಳನ್ನು ತಕ್ಷಣ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಹಾಗೂ ಸ್ಥಳೀಯರು  ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments