ಹಾಸನಾಂಬೆ ಜಾತ್ರಾ ಮಹೋತ್ಸವದ ವೇಳೆ ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಕಂದಾಯ ಇಲಾಖೆಯ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ.
ಆರ್ಐ ಗೋವಿಂದರಾಜ್ ಹಾಗೂ ಯೋಗಾನಂದ್, ವಿಎ ಸಂತೋಷ್ ಅಂಬಿಗರ ಹಾಗೂ ಶಿರಾಜ್ ಮಹಿಮಾ ಪಟೇಲ್ ಅಮಾನತಾದ ಕಂದಾಯ ಇಲಾಖೆ ಸಿಬ್ಬಂದಿಯಾಗಿದ್ದಾರೆ.
ಗೋಲ್ಡ್ ಕಾರ್ಡ್ ಕೌಂಟರ್ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ದೇವಾಲಯದ ಒಳಬಿಟ್ಟ ಆರೋಪದ ಮೇಲೆ ಅಮಾನತು ಮಾಡಿ ಡಿಸಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಮೊದಲ ದಿನ ಕೂಡ ಕರ್ತವ್ಯದ ಐಡಿ ಕಾರ್ಡ್ ದುರುಪಯೋಗ ಆರೋಪದಲ್ಲಿ ಇಬ್ಬರು ವಾರ್ಡನ್ಗಳನ್ನು ಅಮಾನತು ಮಾಡಲಾಗಿತ್ತು.
