Tuesday, August 11, 2026
Homeಕ್ರೈಮ್ಕಡೂರು: ಕೊಳವೆ ಬಾವಿಯಲ್ಲಿ ಹೂತಿಟ್ಟಿದ್ದ ಶವ ಹೊರತೆಗೆದು ಕುಟುಂಬಸ್ಥರಿಗೆ ಹಸ್ತಾಂತರ

ಕಡೂರು: ಕೊಳವೆ ಬಾವಿಯಲ್ಲಿ ಹೂತಿಟ್ಟಿದ್ದ ಶವ ಹೊರತೆಗೆದು ಕುಟುಂಬಸ್ಥರಿಗೆ ಹಸ್ತಾಂತರ

Telegram Group
Join Now

ಕಡೂರು: ತಾಲ್ಲೂಕಿನ ಆಲಘಟ್ಟ ಗ್ರಾಮದ ವಿಜಯಕುಮಾರ ಎಂಬಾತ ತನ್ನ ಪತ್ನಿಯನ್ನು ಕೊಂದು ಜಮೀನಿನಲ್ಲಿದ್ದ ವಿಫಲ ಕೊಳವೆಬಾವಿಯಲ್ಲಿ ಹೂತಿಟ್ಟಿದ್ದ ಶವವನ್ನು ಕಡೂರು ಪೊಲೀಸರು ಭಾನುವಾರ ತಹಶೀಲ್ದಾರ್ ಸಮ್ಮುಖದಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದರು. ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ನೆರವೇರಿಸಲು ಮೃತಳ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ವರದಕ್ಷಿಣೆಯ ಹಣಕಾಸಿನ ವಿಚಾರದ ನೆಪದಲ್ಲಿ ಪತ್ನಿ ಭಾರತಿಗೆ ಮಾನಸಿಕವಾಗಿ ಕಿರುಕುಳ ನೀಡಿ ಆಲಘಟ್ಟ ಗ್ರಾಮದ, ಆರೋಪಿ ಪತಿ ವಿಜಯಕುಮಾರ್ ಸೆ.3ರ ರಾತ್ರಿ ಕೊಲೆ ಮಾಡಿದ್ದ. ತಂದೆ ಗೋವಿಂದಪ್ಪನ ನೆರವಿನೊಂದಿಗೆ ಮನೆಯಿಂದ ಬೈಕ್‌ನಲ್ಲಿ ಶವವನ್ನು ತಂದು ಕೊಳವೆಬಾವಿಯ 12 ಅಡಿ ಆಳದ ಗುಂಡಿಯಲ್ಲಿ ಶವ ಇಳಿಸಿದ್ದರು. ಬಳಿಕ ಎಂ.ಸ್ಯಾಂಡ್ ಮತ್ತು ಗೋಣಿಚೀಲ ಹಾಕಿ ಮುಚ್ಚಿಟ್ಟು ಪತ್ನಿ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ನಾಪತ್ತೆ ಪ್ರಕರಣದಡಿ ದೂರು ನೀಡಿದ್ದ.

ಪ್ರಕರಣ ಕೈಗೆತ್ತಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಮಗಳಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಆರೋಪದಡಿ ಮೃತ ಭಾರತಿಯ ತಾಯಿ ನೀಡಿದ್ದ ದೂರನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿರುವುದು ಗೊತ್ತಾಗಿತ್ತು. ಆರೋಪಿಗಳು ವಿಚಾರಣೆ ವೇಳೆಯಲ್ಲಿ ಶವಹೂತಿಟ್ಟ ಬಗ್ಗೆ ತಪ್ಪೊಪ್ಪಿಕೊಂಡು ಅ.14ರಂದು ಸ್ಥಳ ಮಹಜರು ನಡೆಸಲಾಗಿತ್ತು.

ಹೂತಿಟ್ಟ ಶವ ಹೊರತೆಗೆಯಲು ತರೀಕೆರೆ ಉಪವಿಭಾಗಾಧಿಕಾ ರಿಗೆ ಅರ್ಜಿ ಸಲ್ಲಿಸಿದ ಪೊಲೀಸರು ಅವರ ನಿರ್ದೇಶನದಂತೆ ಕಡೂರು ತಹಶೀಲ್ದಾರ್‌ ಸಿ.ಎಸ್‌.ಪೂರ್ಣಿಮಾ ಅವರಿಂದ ಕಾನೂನಾತ್ಮಕ ಅನುಮತಿ ಪಡೆದು ಅವರ ಉಪಸ್ಥಿತಿಯಲ್ಲಿಯೇ ಜೆಸಿಬಿ ಯಂತ್ರದಿಂದ ಗುಂಡಿ ತೆಗೆದು ಶವವನ್ನು ಹೊರ ತೆಗೆಯಲಾಯಿತು. ಅರೆಬರೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಮಾದರಿಗಳನ್ನು ಎಫ್ಎಸ್ಎಲ್ ತಂಡದ ತಜ್ಞರು ಸಂಗ್ರಹಿಸಿದರು.  ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕೊಲೆಗೀಡಾದ ಭಾರತಿಯ ದೇಹ ಹೊರತೆಗೆಯುತ್ತಿದ್ದಂತೆ ಮೃತಳ ತಾಯಿಯ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಮೃತದೇಹ ಹೊರತೆಗೆಯಲು ಪೊಲೀಸರು ಅಧಿಕಾರಿಗಳ ತಂಡ ದೊಂದಿಗೆ ಬರುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಜಮೀನಿನ ಬಳಿ ಸೇರಿದ್ದರು.

ತರೀಕೆರೆ ಡಿವೈಎಸ್‌ಪಿ ಪರಶುರಾಮಪ್ಪ, ಕಡೂರು ಸಿಪಿಐ ರಫೀಕ್ ಎಂ., ಪಿಎಸ್‌ಐಗಳಾದ ಸಜಿತ್‌ಕುಮಾರ್‌, ಧನಂಜಯ್, ಕಂದಾಯ ನಿರೀಕ್ಷಕ ರವಿಕುಮಾರ್, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments