ಚಿಕ್ಕಮಗಳೂರು: ರಾಜ್ಯ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಬಿಜೆಪಿ ಪಕ್ಷವನ್ನು ಹತ್ತಿಕ್ಕುವ ಉದ್ದೇಶದಿಂದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಅವರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,ಕಾರಾಗೃಹದಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ ಹಾಗೂ ರಾಜ್ಯ ಸರ್ಕಾರದ ವೈಪಲ್ಯದ ಬಗ್ಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಾತಿನಿಂಧನೆ ಪದವನ್ನು ಸಂತೋಷ್ ಕೋಟ್ಯಾನ್ ಬಳಕೆ ಮಾಡಿಲ್ಲ. ಆದರೂ. ಆತನ ಮೇಲೆ ಜಾತಿ ನಿಂಧನೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಕ್ರಮವನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದರು.
ಪೊಲೀಸ್ ಇಲಾಖೆ ಕಾನೂನುಬದ್ಧವಾಗಿ ಕೆಲಸ ಮಾಡಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷದ ಅಣತಿಯಂತೆ ಸಂವಿಧಾನಬಾಹೀರವಾಗಿ ನಡೆದುಕೊಳ್ಳುತ್ತಿದೆ. ಸರ್ಕಾರದ ವೈಪಲ್ಯವನ್ನು ಯಾರು ಖಂಡಿಸುತ್ತಾರೋ ಅವರ ಆತ್ಮಸೈರ್ಯ ವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳಿಸುವುದು ಇದೆ ಮೊದಲಲ್ಲಾ ಎಂದ ಅವರು, ನೈಜ್ಯ ಜಾತಿ ನಿಂಧನೆಗೆ ಒಳಗಾದವರಿಗೆ ನ್ಯಾಯ ಸಿಗುತ್ತಿಲ್ಲ, ಜಾತಿ ನಿಂಧನೆ ಮಾಡಿದವರ ಮೇಲೆ ಯಾವುದೇ ಕ್ರಮವಾ ಗುತ್ತಿಲ್ಲ, ಇಂತಹ ಸುಳ್ಳು ಜಾತಿ ನಿಂಧನೆ ಪ್ರಕರಣವನ್ನು ದಾಖಲಿಸಿ, ನೈಜ್ಯ ಪ್ರಕರಣಗಳನ್ನು ಮರೆಮಾಚಲಾಗುತ್ತಿದೆ. ಪೊಲೀಸ್ ಇಲಾಖೆ ಸಂವಿಧಾನಾತ್ಮಕವಾಗಿ ಕೆಲಸ ಮಾಡಬೇಕು. ಯಾರೋ ಒತ್ತಡಕ್ಕೆ ಮಣಿಯಬಾರದು ಎಂದು ಒತ್ತಾಯಿಸಿದರು.
ಗೃಹಸಚಿವರನ್ನು ಮೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಅಟ್ರಾಸಿಟಿ ಪ್ರಕರಣ ದಾಖಲಿಸಿದೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆ ಏಕಪಕ್ಷೀಯ ನಿರ್ಧಾರ ತಗೆದುಕೊಂಡಿರುವುದು ಖಂಡನೀಯ ಎಂದರು. ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಡಾ.ನರೇಂದ್ರ, ದೀಪಕ್ ದೊಡ್ಡಯ್ಯ, ಯತೀಶ್, ಹಂಪಯ್ಯ ಇದ್ದರು.
