ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಗೋಚೊಳ್ಳಿಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಗೌತಮ್ ಬಿ ಚಿಕ್ಕಮಗಳೂರಿನ ಸುಭಾಷ್ ಚಂದ್ರಭೋಸ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ನ.20 ಹಾಗೂ 21 ರಂದು ಹಾಸನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.
ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಗೌತಮ್ಗೆ ಶಾಲೆಯ ಅಧ್ಯಾಪಕ ವೃಂದ ಹಾಗೂ ಪೋಷಕರು ಶುಭಕೋರಿದ್ದಾರೆ.
