Friday, March 27, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ!

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ!

ಚಿಕ್ಕಮಗಳೂರು: 2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೃಷಿಯಲ್ಲಿ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಅತ್ಯುತ್ತಮ ಜಿಲ್ಲಾ ಮಟ್ಟದ ರೈತ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ರೈತರು ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ನ.29ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕಾಗಿದೆ ಎಂದು ತಿಳಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕಿ ವಿಜಯಲಕ್ಷ್ಮಿ ಚಂದ್ರಶೇಖರ್ (81975 34708) ಅವರನ್ನು ಸಂಪರ್ಕಿಸ ಬಹುದು. ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇಯನ್ನೂ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!