Monday, February 9, 2026
Homeಜಿಲ್ಲಾಸುದ್ದಿಬೇಲೂರು: ಕಾಡಾನೆ ದಾಳಿಗೆ ಬೆಚ್ಚಿಬಿದ್ದ ಕಣಗುಪ್ಪೆ ಗ್ರಾಮಸ್ಥರು : ಕಾಫಿ,ಮೆಣಸು,ಅಡಿಕೆ ಬೆಳೆ ಸಂಪೂರ್ಣ ನಾಶ

ಬೇಲೂರು: ಕಾಡಾನೆ ದಾಳಿಗೆ ಬೆಚ್ಚಿಬಿದ್ದ ಕಣಗುಪ್ಪೆ ಗ್ರಾಮಸ್ಥರು : ಕಾಫಿ,ಮೆಣಸು,ಅಡಿಕೆ ಬೆಳೆ ಸಂಪೂರ್ಣ ನಾಶ

ಬೇಲೂರು: ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಗ್ರಾಮದ ದಯಾನಂದ್ ಎಂಬ ರೈತನ ತೋಟಕ್ಕೆ ತಡರಾತ್ರಿ ಕಾಡಾನೆ ನುಗ್ಗಿ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ.

ಅನೇಕ ವರ್ಷಗಳ ಪರಿಶ್ರಮದಿಂದ ಬೆಳೆಸಿದ್ದ ತೋಟ ಕ್ಷಣಾರ್ಧದಲ್ಲಿ ಧ್ವಂಸವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರೈತ ದಯಾನಂದ್ ಕಣ್ಣೀರಿಟ್ಟಿದ್ದಾರೆ. ಕಾಡಾನೆಗಳು ತೋಟದೊಳಗೆ ಸಂಚರಿಸಿ ಗಿಡಗಳನ್ನು ಮುರಿದು ಹಾಕಿ, ಅಡಿಕೆ ಮರಗಳನ್ನು ನೆಲಕ್ಕುರುಳಿಸಿದ್ದು, ಮೆಣಸು ಬಳ್ಳಿಗಳನ್ನು ಸಂಪೂರ್ಣವಾಗಿ ನಾಶಮಾಡಿವೆ.

ಕಣಗುಪ್ಪೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇತ್ತೀಚೆಗೆ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾತ್ರಿಯ ಸಮಯದಲ್ಲಿ ತೋಟಗಳಿಗೆ ಹೋಗಲು ಕೂಡ ಜನರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!