ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ತಾಣ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಜೀಪ್ ಪಲ್ಟಿಯಾಗಿದ್ದು ವಾಹನದಲ್ಲಿದ್ದ ಏಳು ಮಂದಿ ಪ್ರವಾಸಿಗರಿಗೆ ಗಾಯಗಳಾಗಿವೆ.
ಗಾಯಗೊಂಡವರೆಲ್ಲ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮೂಲದ ಪ್ರವಾಸಿಗರು ಆಗಿದ್ದು , ಪುತ್ತೂರಿನಿಂದ ಸ್ವಂತ ಜೀಪಿನಲ್ಲಿ ಕಾಫಿನಾಡಿನ ಮುಳ್ಳಯ್ಯನಗಿರಿಗೆ ಪ್ರವಾಸ ಬೆಳಸಿದ್ದರು.ದತ್ತಪೀಠಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಅಂಕು ಡೊಂಕಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.ಕೂಡಲೇ ಧಾವಿಸಿದ ಸ್ಥಳಿಯರು ಗಾಯಾಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಿರಿಭಾಗಗಳಲ್ಲಿ ಅಂಕುಡೊಂಕಿನ ರಸ್ತೆ ಇರುವುದರಿಂದ ಚಾಲಕರು ಭಾರೀ ಜಾಗ್ರತೆಯಿಂದ ವಾಹನ ಚಲಿಸಬೇಕು.
