Sunday, August 9, 2026
Homeಜಿಲ್ಲಾಸುದ್ದಿಹಾಸನ: ಭೀಮನ ಜೊತೆ ಫೋಟೋ ತೆಗೆಯಲು ಹೋದ್ರೆ ಬೀಳುತ್ತೆ ಫೈನ್:‌ ಡಿಎಫ್‌ಓ ಸೌರಭ್‌ಕುಮಾರ್

ಹಾಸನ: ಭೀಮನ ಜೊತೆ ಫೋಟೋ ತೆಗೆಯಲು ಹೋದ್ರೆ ಬೀಳುತ್ತೆ ಫೈನ್:‌ ಡಿಎಫ್‌ಓ ಸೌರಭ್‌ಕುಮಾರ್

Telegram Group
Join Now

ಹಾಸನ: ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮ ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಎಫ್‌ಓ ಸೌರಭ್‌ಕುಮಾರ್, ಕಾಡಾನೆ ಭೀಮ ಗ್ರಾಮ, ತೋಟಗಳಿಗೆ ಬರುತ್ತಿದೆ. ಇಟಿಎಫ್ ತಂಡ 24 ಗಂಟೆಗಳ ಕಾಲ ಕಾಡಾನೆ ಭೀಮನನ್ನು ಗಮನಿಸುತ್ತಿದೆ. ಈಗಾಗಲೇ ಸಾರ್ವಜನಿಕರಿಗೆ ವಿನಂತಿ ಮಾಡಿ, ಎಚ್ಚರಿಕೆ ಕೊಡಲಾಗಿದೆ. ಸೆಕ್ಷನ್ 216, ವೈಲ್ಡ್ ಲೈಫ್ ಪ್ರೊಟೆಕ್ಷನ್ ಆ್ಯಕ್ಟ್ 19/70 (ವನ್ಯಜೀವಿ ಸಂರಕ್ಷಣೆ ಕಾಯ್ದೆ) ಪ್ರಕಾರ ಪ್ರಾಣಿಗಳಿಗೆ ತೊಂದರೆ ನೀಡುವುದು ಅಪರಾಧವಾಗಿದೆ ಎಂದು ತಿಳಿಸಿದ್ದಾರೆ

ದಯವಿಟ್ಟು ಕಾಡು ಪ್ರಾಣಿಗಳ ಹತ್ತಿರ ಯಾರು ಹೋಗಬಾರದು. ನಿಮ್ಮ ಪ್ರಾಣವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಕಾಡು ಪ್ರಾಣಿ, ಕಾಡು ಪ್ರಾಣಿನೇ, ಹೀಗಾಗಿ ಜನ ಅನಾವಶ್ಯಕವಾಗಿ ಆನೆಗೆ ತೊಂದರೆ ಕೊಡಬಾರದು. ಇನ್ಮುಂದೆ ಭೀಮನ ಸಮೀಪ ಹೋಗಿ ವಿಡಿಯೋ ಚಿತ್ರೀಕರಣ ಮಾಡಿದರೆ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಡಿಎಫ್‌ಓ ಸೌರಭ್‌ಕುಮಾರ್ ಹೇಳಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments