ಚಿಕ್ಕಮಗಳೂರು :ನೂತನ ಜಿಲ್ಲಾಧಿಕಾರಿಯಾಗಿ ಎನ್. ಎಂ.ನಾಗರಾಜ್ ವರ್ಗಾವಣೆಗೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಸಿ.ಎನ್. ಮೀನಾ ನಾಗರಾಜ್ ಅವರನ್ನು ರಾಜ್ಯ ಸರ್ಕಾರ ಕಂದಾಯ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದೆ.
ಮೀನಾ ನಾಗರಾಜ್ ಅವರಿಂದ ತೆರವಾದ ಚಿಕ್ಕಮಗಳೂರು ಜಿಲ್ಲೆಯ ಡಿಸಿ ಹುದ್ದೆಗೆ ಕರ್ನಾಟಕ ಸ್ಕಿಲ್ ಡೆವೆಲಪ್ ಮೆಂಟ್ ಕಾರ್ಪೊರೇಷನ್ ಎಂಡಿ ಆಗಿದ್ದ ಎನ್.ಎಂ.ನಾಗರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಶ್ರೀಮತಿ ಮೀನಾ ನಾಗರಾಜ್ ಅವರನ್ನು ರೆವಿನ್ಯೂ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
