ಶೃಂಗೇರಿ: ಅಡಿಕೆ ತೋಟದ ಫಸಲು ಕೈಕೊಟ್ಟ ಹಿನ್ನೆಲೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿ ರೈತರೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತನಿಕೋಡು ಎಂಬಲ್ಲಿ ನಡೆದಿದೆ.
ಹೌದು .. ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಸಂದೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂದೇಶ್ ಅವರು ಇತ್ತೀಚಿನ ದಿನಗಳಲ್ಲಿ ತೋಟದಲ್ಲಿ ನಿರೀಕ್ಷಿತ ಫಸಲು ಬಾರದ ಕಾರಣ ಸಾಲ ತಿರಿಸಲು ಆಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
