ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ʼನಲ್ಲಿ ಪಿಕಪ್ ಪಲ್ಟಿಯಾಗಿದ್ದು ಹಿನ್ನೆಲೆಯಲ್ಲಿ ಕೆಲ ಕಾಲ ಘಾಟ್ ನಲ್ಲಿ ಸಂಚಾರ ಅಸ್ತವ್ಯಸ್ತ ಕಾಣಿಸಿಕೊಂಡಿತು.
ಹೌದು .. ಚಾರ್ಮಾಡಿ ಘಾಟ್ʼನ 3ನೇ ತಿರುವಿನಲ್ಲಿ ಮೆಣಸಿನಕಾಯಿ ಮೂಟೆ ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ತುಂಬಾ ಕಿರಿದಾಗಿದ್ದು ಭಾರವಾದ ವಸ್ತುಗಳನ್ನು ತೆಗೆದುಕೊಂಡು ಹೋಗುವಾಗ ತಿರುವಿನಲ್ಲಿ ಪಲ್ಟಿಯಾಗಿದೆ. ಹೀಗಾಗಿ ಕಿರಿದಾದ ರಸ್ತೆಯಲ್ಲಿ ಹಾಗೂ ತಿರುವುಗಳಲ್ಲಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಹೋಗುವುದು ಒಳ್ಳೆಯದು.
