Sunday, August 16, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಫಿನಾಡಿನ ಯುವ ವಿಜ್ಞಾನಿಗೆ ರಾಷ್ಟ್ರಪತಿಗಳಿಂದ ವಿಶೇಷ ಆಹ್ವಾನ!

ಚಿಕ್ಕಮಗಳೂರು: ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಫಿನಾಡಿನ ಯುವ ವಿಜ್ಞಾನಿಗೆ ರಾಷ್ಟ್ರಪತಿಗಳಿಂದ ವಿಶೇಷ ಆಹ್ವಾನ!

Telegram Group
Join Now

ಚಿಕ್ಕಮಗಳೂರು: ದೆಹಲಿಯಲ್ಲಿ ನಡೆಯಲಿರುವ 2026ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಯುವ ವಿಜ್ಞಾನಿ ಅವೈಜ್ ಅಹಮದ್ ಅವರಿಗೆ ರಾಷ್ಟ್ರಪತಿಗಳಿಂದ ವಿಶೇಷ ಆಹ್ವಾನ ಲಭಿಸಿದೆ. ಅವೈಜ್ ಅವರಿಗೆ ಆಹ್ವಾನ ನೀಡಿರುವ ಈ ಕುರಿತು ಭಾರತೀಯ ಅಂಚೆ ಇಲಾಖೆಯೂ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಿರುವ ಇವರ ಪ್ರತಿಭೆಯನ್ನು ಗುರುತಿಸಿ ಈ ಗೌರವ ನೀಡಲಾಗಿದ್ದು, ದೇಶದ ಅತ್ಯುನ್ನತ ಸಮಾರಂಭದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದ ಅವೈಜ್ ಅವರಿಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇವರು ಸ್ಥಾಪಿಸಿರುವ ‘ಪಿಕ್ಸೆಲ್’ ಬಾಹ್ಯಾಕಾಶ ಸಂಸ್ಥೆಯು ಈಗಾಗಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದು, ಈ ಹಿಂದೆ ‘ಶಕುಂತಲಾ’ ಮತ್ತು ‘ಆನಂದ್’ ಎಂಬ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಜಾಗತಿಕ ಗಮನ ಸೆಳೆದಿದೆ.

ಇತ್ತೀಚೆಗಷ್ಟೇ ಪಿಕ್ಸೆಲ್ ಸಂಸ್ಥೆಯು ‘ಫೈರ್‌ಫ್ಲೈ’ ಶ್ರೇಣಿಯ ಅತ್ಯಾಧುನಿಕ ಹೈಪರ್‌ಸ್ಪೆಕ್ಟ್ರಲ್ ಉಪಗ್ರಹಗಳನ್ನು ಉಡಾವಣೆ ಮಾಡಿದ್ದು, ಇವು ಭೂಮಿಯ ಮೇಲಿರುವ ಅದೃಶ್ಯ ಮಾಲಿನ್ಯಕಾರಕಗಳು ಹಾಗೂ ಬೆಳೆಗಳ ಆರೋಗ್ಯವನ್ನು ಅತ್ಯಂತ ನಿಖರವಾಗಿ ಗುರುತಿಸುವ ಸಾಮರ್ಥ್ಯ ಹೊಂದಿವೆ. ಗೂಗಲ್‌ನಂತಹ ಜಾಗತಿಕ ಸಂಸ್ಥೆಗಳ ಬೆಂಬಲದೊಂದಿಗೆ ಬೆಳೆಯುತ್ತಿರುವ ಇವರ ಸಂಸ್ಥೆಯು ಈವರೆಗೆ ಹಲವು ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಯಶಸ್ವಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಪುಟ್ಟ ಗ್ರಾಮದಿಂದ ಹೊರಹೊಮ್ಮಿದ ಈ ಯುವ ವಿಜ್ಞಾನಿಯ ಸಾಧನೆಯು ಮುಂಬರುವ ಯುವ ಪೀಳಿಗೆಗೆ ದೊಡ್ಡ ಪ್ರೇರಣೆಯಾಗಿದ್ದು, ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಅತಿಥಿಯಾಗಿ ಭಾಗವಹಿಸುತ್ತಿರುವುದು ಅವರ ಶ್ರಮಕ್ಕೆ ಸಂದ ಗೌರವವಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments