Saturday, February 7, 2026
Homeಕ್ರೈಮ್ಶೃಂಗೇರಿ: ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು: ನಗದು, ಕಾಫಿ ಬೀಜ ಕಳವು!

ಶೃಂಗೇರಿ: ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು: ನಗದು, ಕಾಫಿ ಬೀಜ ಕಳವು!

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮಲ್ನಾಡ್ ಗ್ರಾಮದ ಕುಂಬಾರಿಯಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು ನಗದು ಹಾಗೂ ಕಾಫಿ ಬೀಜಗಳನ್ನು ಕಳವು ಮಾಡಿದ್ದಾರೆ.

ಜನವರಿ 28ರಂದು ಬೆಳಿಗ್ಗೆ ಗ್ರಾಮದ ನಿವಾಸಿ ರಘುಪತಿ ರಾವ್ ಅವರು ತಮ್ಮ ಮನೆಗೆ ಬೀಗ ಹಾಕಿ ತೀರ್ಥಹಳ್ಳಿಗೆ ತೆರಳಿದ್ದರು. ಈ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ.

ರಘುಪತಿ ರಾವ್ ಅವರು ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದು, ಮನೆಯಲ್ಲಿದ್ದ ಸುಮಾರು 50,000 ರೂಪಾಯಿ ನಗದು ಹಾಗೂ ಎರಡು ಮೂಟೆ ಕಾಫಿ ಬೀಜಗಳನ್ನು ಕಳ್ಳರು ದೋಚಿದ್ದಾರೆ.

ಈ ಸಂಬಂಧ ಸಂತ್ರಸ್ತ ರಘುಪತಿ ರಾವ್ ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳುವಾದ ಸ್ವತ್ತಿನ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!