ಚಿಕ್ಕಮಗಳೂರು: ದಿನಸಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಧ ಘಟನೆ ಅಜ್ಜಂಪುರ ತಾಲೂಕಿನ ಕಲ್ಲೇನಹಳ್ಳಿ ಗೇಟ್ ಬಳಿ ನಡೆದಿದೆ.

ಹೌದು ..ನವೀನ್ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಾಘಿದ್ದು ಧಗಧಗಿಸಿ ಉರಿದ ಹಿನ್ನೆಲೆಯಲ್ಲಿ ಫ್ರಿಜ್, ಪ್ರಿಂಟರ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ವರದಿ: ಶಾಲಿನಿ ಪಿ.ಗೌಡ
