ಚಿಕ್ಕಮಗಳೂರು : ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು ಬಿಸಿಲಿನ ಬೇಗೆಗೆ ಸುಡುತ್ತಿದ್ದ ಭೂಮಿಗೆ ತಂಪೆರೆದಿದ್ದಾನೆ.
ಹೌದು .. ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿದರೆ ಗ್ರಾಮ ಕಡಬಗೆರೆ ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.
ಕಂಡೂ ಕೇಳರಿಯದಷ್ಟು ಪ್ರಮಾಣದಲ್ಲಿ ಏರಿಕೆಯಾಗಿದ್ದ ಬಿಸಿಲ ತಾಪದಿಂದ ಬೆಂದು ಬಸವಳಿದು ಹೋಗಿದ್ದ ಜನರು. ಮಲೆನಾಡಿಗರು ಕೆಲ ದಿನಗಳಿಂದ ದೇವರ ಪೂಜೆ, ಹೋಮ – ಹವನ ನಡೆಸುವ ಮೂಲಕ ವರುಣದೇವನ ಮೊರೆ ಹೋಗಿದ್ದರು.ಮಳೆಯಾಗುತ್ತಿದ್ದಂತೆ ಮಲೆನಾಡಲ್ಲಿ ಬಿಸಿಲ ತಾಪ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ವರದಿ: ಶಾಲಿನಿ ಪಿ.ಗೌಡ
