Thursday, April 2, 2026
Homeಕ್ರೈಮ್ಮೂಡಿಗೆರೆ: SSLC ಪರೀಕ್ಷೆಯ ನಡುವೆ ಆರೋಗ್ಯ ಸಮಸ್ಯೆ : ಚಿಕಿತ್ಸೆ ಪಡೆದು ಮತ್ತೆ ಎಕ್ಸಾಂಗೆ ಹಾಜರಾದ...

ಮೂಡಿಗೆರೆ: SSLC ಪರೀಕ್ಷೆಯ ನಡುವೆ ಆರೋಗ್ಯ ಸಮಸ್ಯೆ : ಚಿಕಿತ್ಸೆ ಪಡೆದು ಮತ್ತೆ ಎಕ್ಸಾಂಗೆ ಹಾಜರಾದ ವಿದ್ಯಾರ್ಥಿ

ಮೂಡಿಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕೊನೆಯ ದಿನವಾದ ಇಂದು ಸಮಾಜಶಾಸ್ತ್ರ ವಿಷಯದ ಪರೀಕ್ಷೆ ನಡೆಯುತ್ತಿದ್ದ ವೇಳೆ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿ ಗಗನ್ ಅವರಿಗೆ ಆಕಸ್ಮಿಕವಾಗಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಘಟನೆ ನಡೆದಿದೆ.

ಪರೀಕ್ಷೆ ಬರೆಯುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗೆ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಶಿಕ್ಷಕರು ಮತ್ತು ಸಿಬ್ಬಂದಿ ಎಚ್ಚರಿಕೆ ಕ್ರಮ ಕೈಗೊಂಡು ಅವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ವಿದ್ಯಾರ್ಥಿಗೆ ತುರ್ತು ಚಿಕಿತ್ಸೆ ನೀಡಿದ್ದು, ಡ್ರಿಪ್ಸ್ ಹಾಕಿ ಆರೋಗ್ಯ ಸ್ಥಿತಿಯನ್ನು ಸ್ಥಿರಗೊಳಿಸಿದರು.

ವಿದ್ಯಾರ್ಥಿಯ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು, ವೈದ್ಯರ ಸಲಹೆಯ ಮೇರೆಗೆ ಅಗತ್ಯ ಚಿಕಿತ್ಸೆ ನೀಡಿದ ನಂತರ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆಯನ್ನು ಮುಂದುವರಿಸಲು ಅವಕಾಶ ಮಾಡಿಕೊಡಲಾಯಿತು.

ವಿದ್ಯಾರ್ಥಿ ಗಗನ್ ಧೈರ್ಯದಿಂದ ಪರೀಕ್ಷೆಯನ್ನು ಪೂರ್ಣಗೊಳಿಸಿದನು. ಪರೀಕ್ಷೆ ಮುಗಿದ ನಂತರ ಮತ್ತೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.


ಈ ಘಟನೆ ವಿದ್ಯಾರ್ಥಿಯ ಶಿಕ್ಷಣದ ಮೇಲಿನ ಆಸಕ್ತಿ ಹಾಗೂ ಶಿಕ್ಷಕರ ತುರ್ತು ಕ್ರಮಗಳಿಗೆ ಸಾಕ್ಷಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!