Friday, July 31, 2026
Homeಕ್ರೈಮ್ಬೇಲೂರು: ಮೊದಲ ಬಾರಿಗೆ ಶ್ವಾನದಳ ಬಳಸಿ ನರಹಂತಕ ಕಾಡಾನೆ ಸೆರೆ!

ಬೇಲೂರು: ಮೊದಲ ಬಾರಿಗೆ ಶ್ವಾನದಳ ಬಳಸಿ ನರಹಂತಕ ಕಾಡಾನೆ ಸೆರೆ!

Telegram Group
Join Now

ಹಾಸನ: ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಇದೇ ಮೊದಲ ಬಾರಿಗೆ ಶ್ವಾನದಳವನ್ನು ಬಳಸಿ ಕಾಡಾನೆ ಇರುವ ಜಾಗವನ್ನು ಪತ್ತೆ ಹಚ್ಚಲಾಯಿತು.

ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆ ಕ್ಯಾಪ್ಟನ್ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು. 

ಚುಚ್ಚುಮದ್ದು ನೀಡುತ್ತಿದ್ದಂತೆ ನರಹಂತಕ ಒಂಟಿಕೋರೆ ಕಾಡಾನೆ ಹಾಗೂ ಕ್ಯಾಪ್ಟನ್ ಕಾಡಾನೆ ಜೊತೆಯಲ್ಲಿಯೇ ಓಡಲಾರಂಭಿಸಿದ್ದವು. ಬೆನ್ನಟ್ಟಿದ ಕಾರ್ಯಾಚರಣೆ ತಂಡ ಎರಡು ಕಾಡಾನೆಗಳನ್ನು ಬೇರ್ಪಡಿಸಿತು. ಸ್ವಲ್ಪ ದೂರು ಓಡಿ ಪ್ರಜ್ಞೆತಪ್ಪಿ ಬಿದ್ದ ಕಾಡಾನೆಯನ್ನು, ಕುಮ್ಕಿ ಆನೆಗಳು ಸುತ್ತುವರಿದವು. ಬಳಿಕ ಕಾಡಾನೆಗೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.

ಕಾಡಾನೆಯನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments