ಚಿಕ್ಕಮಗಳೂರು-ಬಾಳೆಹೊನ್ನೂರು ಮಾರ್ಗದ ಮಧ್ಯೆ ಮತ್ತೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು ಇದರಿಂದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಹೌದು .. ಕಾಡಾನೆಗಳು ಹಗಲಲ್ಲೇ ಸಂಚರಿಸುತ್ತಿರುವುದರಿಂದ ಅಲ್ಲಿರುವ ಜನರಿಗೆ ಸಂಚರಿಸಲು ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಚಿಕ್ಕಮಗಳೂರು-ಬಾಳೆಹೊನ್ನೂರು ಮಾರ್ಗದ ಎಲೆಕಲ್ಲುವಿನಲ್ಲಿ ರಸ್ತೆ ದಾಟಿದ ಗಜರಾಜ ಇದನ್ನು ಅಲ್ಲಿನ ಗ್ರಾಂಸ್ಥರು ಕಣ್ಣಾರೆ ಕಂಡು ಮತ್ತೆ ಇದರ ಕಾಟ ಶುರುವಾಯಿತೆಂದು ಹಿಡಿಶಾಪ ಹಾಕಿದರು.
ಕಳೆದ ಕೆಲವು ತಿಂಗಳುಗಳಲ್ಲಿ ಈ ಭಾಗದಲ್ಲಿ ಆನೆ-ಮಾನವ ಸಂಘರ್ಷ ಮಿತಿಮೀರಿದ್ದು, ಮಲೆನಾಡಿನ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ.
