ಮೂಡಿಗೆರೆ: ಇಬ್ಬರು ಅರಣ್ಯಾಧಿಕಾರಿಗಳಿಗೆ ಕಾಡಾನೆ ದಾಳಿ ನಡೆಸಿ ಗಾಯಗೊಂಡಿರುವ ಘಟನೆ ಮೂಡಿಗೆರೆ ವಲಯದ ಹಾಸ್ಟೆಲ್ ಕಾಡು ಬಳಿ ನಡೆದಿದೆ.
ಹೌದು .. ಇಂದು ಬೆಳಗ್ಗೆ ಹಾಸ್ಟೆಲ್ ಕಾಡು ಬಳಿ ಕಾಡಾನೆ ದಾಳಿ ನಡೆಸಿ ಅರಣ್ಯ ಇಲಾಖೆಯ ಇಟಿಎಫ್ ಬೀಟ್ ಫಾರೆಸ್ಟರ್ ರಮೇಶ್ ಹಾಗೂ ಹೊರಗುತ್ತಿಗೆ ಸಿಬ್ಬಂದಿ ವಿಶ್ವ ಎಂಬುವರಿಗೆ ಗಾಯಗಳಾಗಿವೆ.
ಇಬ್ಬರನ್ನೂ ತಕ್ಷಣ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀಟ್ ಫಾರೆಸ್ಟರ್ ರಮೇಶ್ ಅವರ ಸ್ಥಿತಿ ಗಂಭೀರವಾಗಿದೆ. ವಿಶ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
