ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಧರ್ಮಸ್ಥಳದಿಂದ ತುಮಕೂರಿನ ಪಾವಗಡ ಕಡೆಗೆ ಹೊರಟಿದ್ದ ಬಸ್ ಇದಾಗಿದ್ದು ಈ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರು ಪಾವಗಡ ಮೂಲದವರಾಗಿದ್ದು, ಅವರು ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ತಕ್ಷಣ ಗಾಯಾಳುಗಳನ್ನು 5–6 ಆಂಬುಲೆನ್ಸ್ಗಳ ಮೂಲಕ ಕಕ್ಕಿಂಜೆ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿsi, ಚಿಕಿತ್ಸೆ ನೀಡಲಾಗುತ್ತಿದೆ.
