ಶೃಂಗೇರಿ: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.

ಈ ವೇಳೆ ಶೃಂಗೇರಿ ಮಾಜಿ ಶಾಸಕ ಜೀವರಾಜ್, ಪಕ್ಷದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಬರಮಾಡಿಕೊಂಡರು. ಬಳಿಕ ಶಾರದಾಂಬೆಯ ದರ್ಶನ ಪಡೆದರು.
ಈ ವೇಳೆ ಶೃಂಗೇರಿ ಮಂಡಲದ ಅಧ್ಯಕ್ಷರಾದ ಉಮೇಶ್ ತಲಗಾರು, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾದ ನೂತನ ಕುಮಾರ್ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೃಂಗೇರಿ ಶಿವಣ್ಣ ಉಪಸ್ಥಿತರಿದ್ದರು.
