ಮೂಡಿಗೆರೆ : ತಾಲೂಕಿನ ಕೊಟ್ಟಿಗೆಹಾರ ಸಮೀಪ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿ ತೇವಾಂಶ ಹೆಚ್ಚಾಗಿ ಬಂಡೆ ಕುಸಿತ ಘಟನೆ ನಡೆದಿದೆ.
ಹೌದು .. ಮಲೆನಾಡಿನಲ್ಲಿ ಭಾರೀ ಮಳೆಯಾಗಿದ್ದರಿಂದ ಕಳೆದ ಒಂದು ತಿಂಗಳಿನಿಂದ ಸಾಧಾರಣ ಮಳೆಯಾಗುತ್ತಿದ್ದು ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ತೇವಾಂಶ ಹೆಚ್ಚಾಗಿದೆ. ಇದೇ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಕಂಡು ಬಂದಿದೆ.
ಬಂಡೆ ಕುಸಿತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಹಾಗೆ ವಾಹನ ಸಂಚಾರಕ್ಕೂ ಯಾವುದೇ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಲೆನಾಡಲ್ಲಿ ದಿನದಿಂದ ದಿನಕ್ಕೆ ಮಳೆಯಾಗುತ್ತಿದ್ದು ಘಾಟಿ ಪ್ರದೇಶದಲ್ಲಿ ಮುನ್ನಚ್ಚೆರಿಕೆವಾಗಿ ವಾಹನಗಳನ್ಇನು ಓಡಾಡಿಸುವಂತೆ ತಿಳಿಸಿದ್ದಾರೆ.
