ಚಿಕ್ಕಮಗಳೂರು: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್ ಆಗುತ್ತಿದೆ. ಇದೀಗ ಚಿಕ್ಕಮಗಳೂರಿನಿಂದ ಮೂಡಿಗೆರೆಗೆ ಹೊರಟ್ಟಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲೆಯೇ ಕೆಟ್ಟು ನಿಂತಿರುವ ಘಟನೆಯೊಂದು ನಡೆದಿದೆ.
ಹೌದು .. ಈ ಬಸ್ ಏಕಾಏಕಿ ದಾರಿ ಮಧ್ಯ ಕೆಟ್ಟು ನಿಂತಿದ್ದು ಬಸ್ನ್ನು ಸ್ಟಾರ್ಟ್ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೆಳಗೆ ಇಳಿಸಲಾಗಿದೆ.
ಇದರಿಂದ ಬೇಸತ್ತ ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
