ಕಾವೇರಿ ನೀರಿನ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶಿಸಿರುವುದು ರಾಜ್ಯಾದ್ಯಂತ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ‘ಪ್ರಾಣ ಕೊಟ್ಟೇವು ನೀರು ಬಿಡೆವು’ ಎಂದು ಅನ್ನದಾತರು ಹಾಗೂ ಕನ್ನಡ ಸಂಘಟನೆಗಳು KRS ಡ್ಯಾಂ ಬಳಿ ಬೃಹತ್ ಪ್ರತಿಭಟನೆ ಆರಂಭಿಸಿವೆ.
ಹಾಗೆ ಕೆಆರ್ಎಸ್ ಡ್ಯಾಂಗೆ ಮುತ್ತಿಗೆ ಹಾಕಲಿರುವ ಬಿಜೆಪಿ ನಾಯಕರು ಡ್ಯಾಂ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು ಭದ್ರತೆ ಪರಿಶೀಲನೆ ನಡೆಸಿದ ದಕ್ಷಿಣ ವಲಯದ ಐಜಿ ಡಾ.ಬೋರಲಿಂಗಯ್ಯ.
ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆರಂಭಿಸಿದ್ದು ಇವರ ಜೊತೆ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಂಡ್ಯ-ಮೈಸೂರು ಭಾಗದ ಸಾವಿರಾರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಲಾಶಯದತ್ತ ಜಮಾಯಿಸಿದ್ದಾರೆ.
ಮಂಡ್ಯ ನಗರದಲ್ಲಿ ಈಗಾಗಲೇ ಉಗ್ರ ಪ್ರತಿಭಟನೆ ಆರಂಭವಾಗಿದ್ದು, ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಹೋರಾಟಗಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
