Wednesday, September 9, 2026
Homeಗ್ರೇಟರ್ ಬೆಂಗಳೂರುಸಚಿವ ಜಾರಕಿಹೊಳಿ ಮನೆ ಮೇಲೆ ED ದಾಳಿ: ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಡಿ.ಕೆ.ಶಿವಕುಮಾರ್‌

ಸಚಿವ ಜಾರಕಿಹೊಳಿ ಮನೆ ಮೇಲೆ ED ದಾಳಿ: ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಡಿ.ಕೆ.ಶಿವಕುಮಾರ್‌

Telegram Group
Join Now

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ದೇಶದಲ್ಲಿ ವ್ಯಾಪಾರ-ವಹಿವಾಟು ಮಾಡಬಾರದಾ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ವಾ? ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ? ಸತೀಶ್ ಜಾರಕಿಹೊಳಿ ಒಬ್ಬ ಹಿರಿಯ ಮಂತ್ರಿ ಹಾಗೂ ಉದ್ಯಮಿ. ಯಾವುದೇ ಮುಚ್ಚುಮರೆ ಇಲ್ಲದೆ ಸಮಾಜಸೇವೆ ಮಾಡುತ್ತಿದ್ದಾರೆ. ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ, ಯಾರೂ ಗಾಬರಿಯಾಗಬೇಕಿಲ್ಲ ಎಂದರು.

ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡುತ್ತಿಲ್ಲ? ರಾಹುಲ್ ಗಾಂಧಿ ಅವರ ಮೇಲೆ ಎಫ್‌ಐಆರ್ ದಾಖಲಿಸುತ್ತಾರೆ, ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡುತ್ತಾರೆ. ನಾವು ಯಾವ ಕಾಲದಲ್ಲಿದ್ದೇವೆ? ಇಂತಹ ಷಡ್ಯಂತ್ರಗಳಿಗೆ ನಾವು ಹೆದರುವುದಿಲ್ಲ, ನಮ್ಮ ಶಾಸಕರಿಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಗುಡುಗಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!