ಹಾಸನ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಮನೆ ಮನೆಗೆ ತೆರಳಿ ಮಹಿಳೆಯರಿಗೆ ಬಾಗಿನ ಅರ್ಪಿಸಿ, ಹಬ್ಬದ ಶುಭಾಶಯ ಕೋರಿದರು.
ಗೌರಿ ಗಣೇಶ ಹಬ್ಬದ ಹಿನ್ನೆಲೆ ವಿಶೇಷವಾಗಿ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಂಡ ಪ್ರೀತಂ ಗೌಡ, ಕುಟುಂಬಸ್ಥರೊಂದಿಗೆ ಆತ್ಮೀಯವಾಗಿ ಮಾತನಾಡಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ವೇಳೆ ಸ್ಥಳೀಯ ಮಹಿಳೆಯರು ಹಾಗೂ ಸಾರ್ವಜನಿಕರು ಪ್ರೀತಂ ಗೌಡ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮನೆ ಮನೆಗೆ ತೆರಳಿ ಬಾಗಿನ ಅರ್ಪಿಸಿದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
