Monday, August 4, 2025
!-- afp header code starts here -->
Homeರಾಜಕೀಯರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಿದ್ದೆ. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು  ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.

ಬಸ್ ದರ  ಹೆಚ್ಚಳದ ಬಗ್ಗೆ ಚರ್ಚಿಸಿ ಕ್ರಮಗೊಳ್ಳಲಾಗುವುದು:

ಸರ್ಕಾರ ಬಸ್ ದರ ಹೆಚ್ಚಳವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಇದೇ ವೇಳೆ ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ರಿಯಾಕ್ಟ್ ಮಾಡಿದ ಅವರು,  ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!