ಪಬ್ಲಿಕ್ ಇಂಪ್ಯಾಕ್ಟ್ ಮಡಿಕೇರಿ : ಕಾಡಾನೆ ದಾಳಿಗೆ ವೃದ್ಧೆ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಚೆನ್ನಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ. ಕಾತಯಿ(72) ಮೃತ ವೃದ್ಧೆ.
ಮನೆಯ ಸಮೀಪವೇ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಮನೆಯಿಂದ ಹೊರಬರುತ್ತಿದ್ದ ಸಂದರ್ಭ ಆಕೆ ಮೇಲೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳದಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಸೇರಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



