ಬೆಂಗಳೂರು : ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ಜಾರಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಹೇಳಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವು ಬೆಂಗಳೂರಿನಲ್ಲಿ ನಡೆಸಿದ ಜನಪ್ರತಿನಿಧಿಗಳ ಸಭೆಯಲ್ಲಿ ನಯನಾ ಈ ಎಚ್ಚರಿಕೆಯ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ. ‘ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದೆ. ಜಾರಿಯಾದರೆ ಪಶ್ಚಿಮಘಟ್ಟದ ಜನಜೀವನ ಅಸ್ತವ್ಯಸ್ತವಾಗುತ್ತದೆ. ಜನಪ್ರತಿನಿಧಿಗಳಿಗೆ ಮತದಾರರನ್ನು ಎದುರಿಸುವುದಕ್ಕೆ ಕಷ್ಟವಾಗುತ್ತದೆ ಎಂದು ಅವರು ಸಭೆಯಲ್ಲಿ ಹೇಳಿದ್ದಾರೆಂದು ತಿಳಿದುಬಂದಿದೆ.



