Friday, March 27, 2026
Homebig breakingಮುಡಾ ನಿವೇಶನ ಹಂಚಿಕೆ ತನಿಖೆ ಸಿಬಿಐಗೆ ವಹಿಸುವಂತೆ ಅರ್ಜಿ - ಜ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್…‌

ಮುಡಾ ನಿವೇಶನ ಹಂಚಿಕೆ ತನಿಖೆ ಸಿಬಿಐಗೆ ವಹಿಸುವಂತೆ ಅರ್ಜಿ – ಜ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್…‌

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜನವರಿ 27ಕ್ಕೆ ಮುಂದೂಡಿದೆ.
ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಲೋಕಾಯುಕ್ತ ಪೊಲೀಸರ ತನಿಖಾ ವರದಿ ಎಲ್ಲಿದೆ ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಪರ ವಕೀಲರು ತನಿಖೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಹೇಳಿದರು. ಜ.26ರ ಸಂಜೆಯ ಒಳಗೆ ಎಷ್ಟು ತನಿಖೆ ನಡೆದಿದೆಯೋ ಅಷ್ಟು ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಿದರು. ಲೋಕಾಯುಕ್ತ ತನಿಖೆಗೆ ತಡೆ ನೀಡುವುದಿಲ್ಲ. ತನಿಖೆ ಮುಂದುವರೆಯುತ್ತಿರಲಿ ಎಂದು ಹೇಳಿದರು.
ಪ್ರಭಾವಿ ರಾಜಕಾರಣಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಪೊಲೀಸರು ತನಿಖೆಯನ್ನು ಪಾರದರ್ಶಕವಾಗಿ ಮಾಡಲು ಸಾಧ್ಯವಿಲ್ಲ. ಲೋಕಾಯುಕ್ತದ ತನಿಖೆ ಮೇಲೆ ಸ್ಪಷ್ಟ ನಂಬಿಕೆ ಇಲ್ಲ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಪತ್ನಿ ಪಾರ್ವತಿಯವರು ನಿವೇಶನಗಳನ್ನು ಮರಳಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!