Wednesday, August 12, 2026
Homeಬ್ರೇಕಿಂಗ್ ನ್ಯೂಸ್ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಟುಂಬಸ್ಥರಿಗೆ ಶಾಸಕರ ಸಾಂತ್ವನ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಟುಂಬಸ್ಥರಿಗೆ ಶಾಸಕರ ಸಾಂತ್ವನ

Telegram Group
Join Now

ಹಾಸನ: ಹಾಸನ, ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೆ ಜಿಲ್ಲೆಯ ‌ ಶೆಟ್ಟಿಹಳ್ಳಿ ಸಮೀಪದ ಮುಟ್ಟನಹಳ್ಳಿ ಗ್ರಾಮದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

ಶೆಟ್ಟಿಹಳ್ಳಿ ಸಮೀಪದ ಮುಟ್ಟನಹಳ್ಳಿ ಗ್ರಾಮದ ಸಣ್ಣಪ್ಪ ಶೆಟ್ಟಿ(50 )ಮೃತ ವ್ಯಕ್ತಿಯಾಗಿದ್ದಾರೆ. ಬೆಳಗ್ಗೆ ಪರಿಚಯಸ್ಥರ ಒಬ್ಬರ ಸಾವಿಗೆ ಹೋಗಿ ಮನೆಗೆ ಬಂದು ನಂತರ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯ ಮನೆಗೆ ಸಿಮೆಂಟ್ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಹಾಗೆ ಹೃದಯಾಘಾತ ತಪ್ಪಿಸಲು ಎಲ್ಲರೂ ಪರೀಕ್ಷೆ ಮಾಡಿಕೊಳ್ಳುವಂತೆ ಶಾಸಕರು ಸ್ಥಳಿಯರಿಗೆ ಸಲಹೆ ನೀಡಿದರು.

ಸದ್ಯ ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.ಮೃತಪಟ್ಟವರು ವಯಸ್ಸಾದವರಷ್ಟೇ ಅಲ್ಲ, ಸಣ್ಣ ವಯಸ್ಸಿನವರೂ ಸೇರಿ ಎಲ್ಲಾ ವಯೋಮಾನದವರೂ ಇದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments