Thursday, March 26, 2026
Homeವನ್ಯ ಜೀವಿಚಿಕ್ಕಮಗಳೂರು: ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು!

ಚಿಕ್ಕಮಗಳೂರು: ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು!

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ, ಲಕ್ಕವಳ್ಳಿ ವಲಯದ, ಸಾವೇ ಅರಣ್ಯ ಪ್ರದೇಶದ ಕೂಟ್ ರಸ್ತೆಯಲ್ಲಿ ಹುಲಿಯೊಂದು ಮೃತಪಟ್ಟಿದ್ದು. ಹುಲಿ ಕಳೇಬರ ಅಲ್ಲಿನ ಗಸ್ತು ಸಿಬ್ಬಂದಿಗಳಿಗೆ ಗುರುವಾರ ಬೆಳಿಗ್ಗೆ ಸಿಕ್ಕಿದೆ.

ಅಂದಾಜು 7 ವರ್ಷದ ಹೆಣ್ಣು ಹುಲಿ ಆಗಿದ್ದು,ಎರಡು ಹುಲಿಗಳ ಮಧ್ಯೆ ಕಾದಾಟ ನೆಡೆದು ಸತ್ತಿದೆ ಎನ್ನಲಾಗಿದೆ.ದೇಹದಲ್ಲಿ ಹಲವಾರು ಕದಾಟದ ಗಾಯಗಳ ಗುರುತು ಪತ್ತೆಯಾಗಿದೆ

ಎನ್ ಆರ್ ಪುರ ಸರ್ಕಾರಿ ಪಶುವೈದ್ಯ ಶಿವಕುಮಾರ್ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದರು.ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನ ವೈದ್ಯರು ಸಹಕರಿಸಿದರು, ಹುಲಿ ದೇಹದ ಕೆಲವು ತುಣುಕು ಮತ್ತು ರಕ್ತ ಮಾದರಿ ಸಂಗ್ರಹಿಸಿ ಸಾವಿನ ನಿಖರ ಮಾಹಿತಿ ತಿಳಿಯಲು ಉನ್ನತ ಮಟ್ಟದ ಪ್ರಯೋಗಲಕ್ಕೆ ಕಲಿಸಲು ತೀರ್ಮಾನಿಸಲಾಯಿತು. ಸ್ಥಳದಲ್ಲಿ ಲೋಹ ಪರಿಶೋಧಕ ಯಂತ್ರ ಬಳಸಿ ದೇಹದ ಮೇಲೆ ಲೋಹ ,ಮದ್ದು ಗುಂಡು ಇದೀಯ ಎಂದು ಪರಿಶೀಲನೆ ಮಾಡಿದರು.ಎಲ್ಲ ರೀತಿಯಲ್ಲೂ ಹುಲಿಯ ಕಳೇಬರ ಪರಿಶೀಲನೆ ಮಾಡಲಾಗಿದೆ.

ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಲಾಯಿತು. ಅನಂತರ ಹುಲಿಯ ಕಳೇಬರ ಸುಡಲಾಯಿತು.

ಲಕ್ಕವಳ್ಳಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಸಾಗರ್,ವಲಯ ಅರಣ್ಯಾಧಿಕಾರಿ ಸಂತೋಷ್ ಸೂರಿಮಠ, ಗೌರವ ವನ್ಯಜೀವಿ ಪರಿಪಾಲಕ ವೀರೇಶ್ ಜಿ,ವೈಲ್ಡ್ ಕೆರ್ ಸಂಸ್ಥೆಯ ಮುಖ್ಯಸ್ಥ ಮಧು ಮೂಗುತಿಹಳ್ಳಿ,ಶಿವಮೊಗ್ಗ ಜಿಲ್ಲಾ ಮಾಜಿ ವನ್ಯಜೀವಿ ಪರಿಪಾಲಕ ವಿನಾಯಕ,ಸ್ಥಳೀಯ ಪಂಚಾಯಿತಿ ಪ್ರತಿನಿಧಿಗಳು ಸೇರಿದಂತೆ ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು,ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಯಲ್ಲಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!