Tuesday, August 11, 2026
Homeಜಿಲ್ಲಾಸುದ್ದಿಬಂಡೀಪುರ: ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ: ಮುಂದೇನಾಯ್ತು ಗೊತ್ತಾ?

ಬಂಡೀಪುರ: ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ: ಮುಂದೇನಾಯ್ತು ಗೊತ್ತಾ?

Telegram Group
Join Now

ಚಾಮರಾಜನಗರ: ಬಂಡೀಪುರದಲ್ಲಿ ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಪಾರಾದವನಿಗೆ ಅರಣ್ಯ ಇಲಾಖೆ ಶಾಕ್‌ ಕೊಟ್ಟಿದೆ. ದಾಳಿಯಿಂದ ಬಚಾವ್‌ ಆದ ನಂಜನಗೂಡಿನ ವ್ಯಕ್ತಿಗೆ ಇಲಾಖೆ 25,000 ರೂ. ದಂಡ ವಿಧಿಸಿದೆ.

ಇಲ್ಲಿಯವರೆಗೂ ಕೂಡ ಕೇರಳ ಮೂಲದ ವ್ಯಕ್ತಿ ಎಂದು ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದರು. ಆದರೆ ಫೋಟೋ ತೆಗೆಯಲು ಹೋಗಿದ್ದ ವ್ಯಕ್ತಿ ನಂಜನಗೂಡಿನ ಬಸವರಾಜು ಎಂದು ಈಗ ಗೊತ್ತಾಗಿದೆ. ಈತ ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ ಕೇರಳಕ್ಕೆ ಹೋಗಿ ಕರ್ನಾಟಕಕ್ಕೆ ಬಂದಿದ್ದ‌. ಘಟನೆ ಬಳಿಕ ಮೊಬೈಲ್ ಸ್ವೀಚ್ ಆಫ್ ಮಾಡಿದ್ದ. ಕೊನೆಗೂ ಬಸವರಾಜುನನ್ನು ಅರಣ್ಯ ಸಿಬ್ಬಂದಿ ಪತ್ತೆ ಹಚ್ಚಿ ಬಿಸಿ ಮುಟ್ಟಿಸಿದ್ದಾರೆ.

ಇದೀಗಾ ಬಂಡೀಪುರದ ಅರಣ್ಯ ಇಲಾಖೆ ಅಧಿಕಾರಿಗಳು ಬಸವರಾಜು ಅವರಿಂದ ವಿಡಿಯೋ ಮಾಡಿಸಿ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಬಸವರಾಜು, ನಾನು ಬಂಕಾಪುರದ ದೇವಾಸ್ಥಾನಕ್ಕೆ ಹೋಗಿದ್ದೆ. ಅಲ್ಲಿಂದ ಬರುವಾಗ ಮೋಜು ಮಸ್ತಿಗಾಗಿ ಸೆಲ್ಫಿ, ಫೋಟೋ ತೆಗೆಯಲು ಮುಂದಾಗಿದ್ದೆ. ಈ ವೇಳೆ ಕಾಡಾನೆ ನನ್ನ ಮೇಲೆ ದಾಳಿ ನಡೆಸಿತು. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಫೋಟೋ, ಸೆಲ್ಫಿ ತೆಗೆಯುವ ಕೆಲಸ ಬೇಡ ಎಂದು ಜಾಗೃತಿ ಮೂಡಿಸುವ ಮಾತಾಡಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments