ಚಿಕ್ಕಮಗಳೂರು: ಲೋಕಾಯುಕ್ತ ಅಧಿಕಾರಿಗಳು ಕೊಪ್ಪ ಪಟ್ಟಣ ಪಂಚಾಯಿತಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಹೌದು .. ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಗುತ್ತಿಗೆದಾರನಿಂದ 50,000 ಲಂಚ ಪಡೆಯುವ ವೇಳೆಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಕೊಪ್ಪ ಪಟ್ಟಣ ಪಂಚಾಯಿತಿಯಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಲಂಚ ಕೇಳುತ್ತಿದ್ದು ಈ ಆರೋಪ ನಿರಂತರವಾಗಿ ಕೇಳಿ ಬರುತ್ತಿದ್ದ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಚಂದ್ರಕಾಂತ್ ಗುತ್ತಿಗೆದಾರನಿಂದ 50,000 ಲಂಚ ಪಡೆಯುವ ವೇಳೆಗೆ ಲೋಕಾಯುಕ್ತ ದಾಳಿ ನಡೆಸಿದ್ದು ಹಾಗೆ ಪಟ್ಟಣ ಪಂಚಾಯಿತಿನಲ್ಲಿ ದಾಖಲೆಯನ್ನು ಸಹ ಪರಿಶೀಲಿಸುತ್ತಿರುವ ಅಧಿಕಾರಿಗಳು
ಈ ವರ್ಷದ ಆರಂಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಓ ಕಚೇರಿ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದರೂ ಬುದ್ದಿ ಕಲಿಯದ್ದರಿಂದ ಮತ್ತೊಮ್ಮೆ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿ ಬಿಸಿಮುಟ್ಟಿಸಿದ್ದಾರೆ.
