ಶೃಂಗೇರಿ: ಬಾಳೆಹೊನ್ನೂರು, ನರಸಿಂಹರಾಜಪುರ, ಖಾಂಡ್ಯ, ಕೊಪ್ಪ, ಮೂಡಿಗೆರೆ ಭಾಗದ ಜನರು ಕಾಡಾನೆ ಹಾವಳಿಯಿಂದ ತತ್ತರಿಸಿ ಹೋಗಿದ್ದು, ಜೀವಭಯದಿಂದ ಕೃಷಿ ತೋಟಗಳಿಗೆ ಹೋಗುವ ಪರಿಸ್ಥಿತಿ ಉದ್ಭವಿಸಿತ್ತು. ಈಗ ಶೃಂಗೇರಿ ಭಾಗಕ್ಕೂ ಕಾಡಾನೆಗಳು ಎಂಟ್ರಿ ಕೊಟ್ಟಿದ್ದು ಅಪಾರ ಪ್ರಮಾಣದ ಬೆಳೆ ನಾಶ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು .. ಶೃಂಗೇರಿ ತಾಲೂಕಿನಲ್ಲಿ ಬೀಡು ಬಿಟ್ಟ ಕಾಡಾನೆಗಳು ಬೇಸೂರು, ವೈಕುಂಪುರ, ಕಲ್ಕಟ್ಟೆ ಭಾಗದಲ್ಲಿ ಸಂಚಾರ ಕಂಡು ಬಂದಿರುತ್ತದೆ ತೆಕ್ಕೂರು ವೈಕುಂಠಪುರ ಕಲ್ಕಟ್ಟೆ ಶಾಲೆಗಳಿಗೆ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಲಾಗಿದೆ
ಅರಣ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ಹಾನಿಯನ್ನು ತಡೆಗಟ್ಟಲು ಆನೆಯನ್ನು ಕಾಡಿಗೆ ಓಡಿಸಲು ನಿರಂತರವಾಗಿ ಕಾರ್ಯಾಚರಣೆ ಮಾಡಲಾಗುತ್ತಿದೆ.
