ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಭಾಗದಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಗೆ ಹೇಮಾವತಿ ಮೈದುಂಬಿ ಹರಿಯುತ್ತಿದ್ದು ಇತ್ತ ತಾಲೂಕಿನಾದ್ಯಂತ ಗದ್ದೆ-ತೋಟಗಳು ಜಲಾವೃತವಾಗಿವೆ. ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹೌದು .. ಮೂಡಿಗೆರೆ ತಾಲೂಕಿನ ಕಿತ್ತಲೆಗಂಡಿ ಗ್ರಾಮದಲ್ಲಿರುವ ಕಿಡಿ ಚೆಕ್ ಡ್ಯಾಂ ಸಂಪೂರ್ಣ ಮುಳುಗಡೆ ಹೊಂದಿದ್ದು ವರುಣನ ಆರ್ಭಟ ನಿರಂತರವಾಗಿದ್ದು ನೀರಿನ ಪ್ರಮಾಣ ಹೆಚ್ಚಾಗಿ ಡ್ಯಾಂ ಸಂಪೂರ್ಣ ಮುಳುಗಿಹೋಗಿದೆ. ಇತ್ತ ಚಾರ್ಮಾಡಿ ಘಾಟ್ ಬಳಿ ಭಾರೀ ಮಳೆಯಾಘುತ್ತಿದ್ದರಿಂದ ವಾಹನ ಸವಾರರಿಗೆ ಭಾರೀ ತೊಂದರೆ ಉಂಟಾಗಿದೆ.
