ಚಿಕ್ಕಮಗಳೂರು : ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು . ಮರದಿಂದ ಬಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಹೊಡೆದು ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ
ಹೌದು . ಮರದಿಂದ ಬಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಕಾರ್ಮಿಕನನ್ನೇ ಹೊಡೆದು ಸಾಯಿಸಿದ ತೋಟದ ಮಾಲೀಕ ಈ ಘಟನೆ ನಡೆದಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.ತೋಟದ ಮಾಲೀಕ ಮಧು ಎಂಬಾತ ಕೂಲಿ ಕಾರ್ಮಿಕ ಕುಮಾರ್ (37) ನನ್ನು ಗುದ್ದಲಿಯಿಂದ ಹೊಡೆದು ಸಾಯಿಸಿರುತ್ತಾನೆ.
ಘಟನೆಯ ವಿವರ:
ಮಧು ಎನ್ನವವನ ತೋಟದಲ್ಲಿ ಕುಮಾರ್ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಂಡು ಹೋಗ್ತಿದ್ದ. ತೋಟದ ಮಾಲೀಕ ಮಧು ಈ ಹಿಂದೆ ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿದ್ದ. ನಿನ್ನೆ ಕೂಡ ತೆಂಗಿನಕಾಯಿ ತೆಗೆದುಕೊಂಡು ಹೋಗುವಾಗ ತೋಟದ ಮಾಲೀಕ ಮಧುಗೆ, ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಮಧು ಗುದ್ದಲಿಯಿಂದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾನೆ.
ಮದ್ಯ ಸೇವಿಸಿ ಊಟ-ತಿಂಡಿ ಮಾಡಿರದ ಕಾರಣ ಕುಮಾರ್ ನಿತ್ರಾಣಗೊಂಡು ತೀವ್ರ ರಕ್ತಸ್ರಾವದಿಂದ ಅಲ್ಲೆ ಬಿದ್ದಿದ್ದನು. ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಕುಮಾರ್ ಸಾವುನ್ನಪ್ಪಿದ್ದಾನೆ. ಸದ್ಯ ಸಖರಾಯಪಟ್ಟಣ ಪೋಲಿಸರು ಕೊಲೆ ಆರೋಪಿ ಮಧುನನ್ನು ಬಂಧಿಸಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
