ಹಾಸನ: ಆತಂಕ ಸೃಷ್ಟಿ ಮಾಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರ್ಕಹಳ್ಳಿ ಗ್ರಾಮದಲ್ಲಿ ಕಂಡುಬಂದಿದೆ.
ಹೌದು .. 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಚಂಗಡಿಹಳ್ಳಿ ರವಿ. ಗ್ರಾಮದ ಕಾಫಿ ತೋಟದಲ್ಲಿ ಅಡಗಿ ಆತಂಕ ಸೃಷ್ಟಿ ಮಾಡಿದ್ದ ಭಾರೀ ಗಾತ್ರದ ಉದ್ದದ ಹಾವು. ಗ್ರಾಮಸ್ಥರ ಮಾಹಿತಿ ಆಧರಿಸಿ ಹಾವನ್ನು ಸೆರೆಹಿಡಿದಿದ್ದಾರೆ.
ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಬಿಸಿಲೆ ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಚಂಗಡಿಹಳ್ಳಿ ರವಿ. ಅರಣ್ಯ ಇಲಾಖೆ ಸಿಬ್ಬಂದಿಯವರ ಸಮ್ಮುಖದಲ್ಲಿ ದಟ್ಟಾರಣ್ಯ ಸೇರಿದ ಕಾಳಿಂಗ ಸರ್ಪ!
