ಕೊಪ್ಪ: ಬಿಡಾಡಿ ದನಗಳನ್ನು ರಕ್ಷಣೆ ಮಾಡಿ ಗೋಶಾಲೆಗೆ ಸ್ಥಳಾಂತರ ಮಾಡಿಸುವ ಯಶಸ್ವಿ ಕಾರ್ಯಾಚರಣೆಯನ್ನು ಕೊಪ್ಪ ಪೊಲೀಸರು ಮಾಡಿದ್ದಾರೆ.
ಹೌದು .. ನಿನ್ನೆ( ಬುಧವಾರ) ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಅವರ ನೇತೃತ್ವದಲ್ಲಿ ಕೊಪ್ಪದ ತಾಲೂಕು ಪಂಚಾಯತ್ ಪಶುಸಂಗೋಪನ ಇಲಾಖೆ , ಪಟ್ಟಣ ಪಂಚಾಯತ್ ಹಾಗೂ ಕೊಪ್ಪದ ಎಲ್ಲ ಗ್ರಾಮ ಪಂಚಾಯಿತಿಗಳ ಸಹಕಾರದೊಂದಿಗೆ ಬೀಡಾಡಿ ದನಗಳನ್ನು ರಕ್ಷಣೆ ಮಾಡಿ ಗೋಶಾಲೆಗೆ ಸ್ಥಳಾಂತರಿಸುವ ಯಶಸ್ವಿ ಕಾರ್ಯಾಚರಣೆ ನಡೆಸಲಾಯಿತು
ಈ ಸಂದರ್ಭದಲ್ಲಿ ಬಸವರಾಜ್ ಅವರು ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆಯು ಮುಂದುವರೆಯಲಿದೆ ಎಂದು ತಿಳಿಸಿರುತ್ತಾರೆ
