Sunday, February 15, 2026
Homeಜಿಲ್ಲಾಸುದ್ದಿಆಲ್ದೂರು: ಹಾಡಹಗಲೇ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳ ಹಿಂಡು!

ಆಲ್ದೂರು: ಹಾಡಹಗಲೇ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳ ಹಿಂಡು!

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆ ಕಿರುಕುಳ ಹೆಚ್ಚಾಗಿದ್ದು ಹಾಡಹಗಲೇ ರೈತರ ಕೃಷಿ ಭೂಮಿಗಳಿಗೆ ಕಾಡಾನೆಗಳ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ಬೆಳೆದಿರುವಂತಹ ಬೆಳೆಗಳನ್ನ ನಾಶ ಮಾಡುತ್ತಿವೆ.

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಬೆಳಗೋಡು ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಕೂಡ ಸಂಕಟ ಎದುರಾಗಿದೆ.

ಕಾಡಾನೆಗಳು ಕಾಫಿ, ಅಡಕೆ, ಬಾಳೆ ಬೆಳೆಗಳನ್ನು ನಾಶ ಮಾಡುತ್ತಿವೆ. ಇತ್ತೀಚಿಗೆ ಗದ್ದೆ ನಾಟಿ ಮಾಡಿರುವ ಗದ್ದೆಗಳನ್ನು ತುಳಿದು ನಾಶ ಮಾಡುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆನೆ ನಿಗ್ರಹ ಪಡೆಯ ಸದಸ್ಯರು ಪಟಾಕಿ ಹೊಡೆಯುದನ್ನು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!