ಹಾಸನದ ಜಿಪಂ ಎಂಜಿನಿಯರಿಂಗ್ ವಿಭಾಗದ ಅಕೌಂಟ್ಸ್ ಅಧೀಕ್ಷಕ ರಾಮಚಂದ್ರ ಹಾಗೂ FDA ಲತಾ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೌದು .. ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಚೇರಿಯ ಲೆಕ್ಕ ವಿಭಾಗದ ಅಧೀಕ್ಷಕ ರಾಮಚಂದ್ರು ಹಾಗೂ ಪ್ರಥಮ ದರ್ಜೆ ಸಹಾಯಕಿ ಲತಾ ಅವರು ಲಂಚ ಪಡೆಯುತ್ತಿದ್ದಾಗ, ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದರು.
ಕಾಮಗಾರಿ ಬಿಲ್ ಮಂಜೂರಾತಿಗಾಗಿ ಬೇಲೂರಿನ ಶಶಿ ಎಂಬುವವರಿಂದ ನಗರದ ಎನ್.ಆರ್.ವೃತ್ತದ ಸಮೀಪ ಇರುವ ಕಚೇರಿಗೆ ತಲಾ 1 ಸಾವಿರ ಪಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.
ಇನ್ಸ್ಪೆಕ್ಟರ್ಗಳಾದ ಚಂದ್ರಶೇಖರ್ ಮತ್ತು ಶಿಲ್ಪಾ ನೇತೃತ್ವದಲ್ಲಿ ಲಂಚದ ಹಣ ಸಮೇತ ಕಾರ್ಯಾಚರಣೆ ನಡೆಯಿತು
