ಸಕಲೇಶಪುರ: ಸಾಲಬಾದೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಯಸಲೂರು ಹೋಬಳಿ ಸಂತೆಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ತಮ್ಮ ಕೃಷಿ ಜಮೀನಿನಲ್ಲಿ ಬೆಳೆ ಬೆಳೆಯಲು ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ನಿಂದಾ ನೋಟೀಸ್ ನೀಡಲಾಗಿತ್ತು, ಒಂದೆಡೆ ಈ ಬಾರಿ ಸುರಿದ ಭಾರೀ ಮಳೆಗೆ ಬೆಳೆ ಹಾಳಾಗಿ ಆದಾಯವು ಕುಂಠಿತ ಆಗಿತ್ತು ಇದರ ಬಗ್ಗೆ ಕುಟುಂಬಸ್ಥರ ಬಗ್ಗೆಯೂ ಹೇಳಿಕೊಂಡು ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸಾಲ ತೀರಿಸಲು ದಾರಿ ಕಾಣದೆ ಮನನೊಂದು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿರುವ ಎಸ್.ಜಿ ದಿವಾಕರ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು, ನಗರದ ಹಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
