Tuesday, February 10, 2026
Homeಕ್ರೈಮ್ಕಡೂರು: ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ದಂಡ!

ಕಡೂರು: ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ದಂಡ!

ಚಿಕ್ಕಮಗಳೂರು: ಕಳೆದ ಐದು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

22.11.2020 ರಂದು ಸಖರಾಯಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ದೊಡ್ಡಿಹಟ್ಟಿ ಗ್ರಾಮದಲ್ಲಿ ಪ್ರದೀಪ ಎಂಬುವವನನ್ನು ಆತನ ಹೆಂಡತಿ ರಾಗಿಣಿ (33) ಮತ್ತು ಪ್ರದೀಪನೊಂದಿಗೆ ಗಾರೆ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸ (33) ಸೇರಿಕೊಂಡು ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಹಿನ್ನಲೆಯಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಪೂರ್ಣಗೊಳಿಸಿ ಕಡೂರು ವೃತ್ತದ ಅಂದಿನ ಸಿ.ಪಿ.ಐ.ಬಿ. ಎಸ್. ಮಂಜುನಾಥ್ ರವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!