ನಾಪೋಕ್ಲು(ಕೊಡಗು) : ನೇಣು ಬಿಗಿದುಕೊಂಡು ಬ್ಯಾಂಕ್ ವ್ಯವಸ್ಥಾಪಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಕಕ್ಕಬೆಯಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ನ ನಾಪೋಕ್ಲು ಶಾಖೆಯಲ್ಲಿ ಮ್ಯಾನೇಜರ್ ಆಗಿದ್ದ ವಿಜು(46) ಮೃತ ವ್ಯಕ್ತಿ. ಮೂಲತಃ ಕೇರಳದ ಚಿಂಗೋಲಿ ಆಲಿಪುಳ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
