ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಮೀಕ್ಷೆ ಹಿನ್ನೆಲೆ ರಾಜ್ಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ದಸರಾ ರಜೆಯಲ್ಲಿರುವ ಮಕ್ಕಳಿಗೆ ಹೆಚ್ಚುವರಿಯಾಗಿ ಇನ್ನೂ 10 ದಿನ ರಜೆ ಸಿಗಲಿದೆ. ಈ ಅವಧಿಯಲ್ಲಿ ಜಾತಿಗಣತಿ ಸರ್ವೇ ಮುಗಿಸಲು ಸರ್ಕಾರ ಯೋಜಿಸಿದೆ. ಖಾಸಗಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ. ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ಸರ್ವೆಯಿಂದ ವಿನಾಯಿತಿ ನೀಡಲಾಗಿದೆ.
