ಬೆಂಗಳೂರು : ಮುಡಾ ಅಕ್ರಮ ಸಂಬಂಧ ಸಿಎಂ ವಿರುದ್ಧ ತನಿಖೆಗೆ ನ್ಯಾಯಾಲಯ ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಯಾವುದೇ ರೀತಿಯ ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆ ಅಂತ ಸಿಎಂ ಹೇಳಿದ್ದಾರೆ.
ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆ, ಯಾರಿಗೂ ಹೆದರಲ್ಲ. ಏನೇ ಎದುರಾದರೂ ಎಲ್ಲವನ್ನೂ ಎದುರಿಸುತ್ತೇನೆ. ಕಾನೂನು ಹೋರಾಟ ನಡೆಸಲು ತಯಾರಿದ್ದೇನೆ. ವಕೀಲರ ಜತೆ ಚರ್ಚಿಸಿ ಕಾನೂನು ಹೋರಾಟ ನಡೆಸುತ್ತೇನೆ. ಕೋರ್ಟ್ ಆದೇಶ ಸಿಕ್ಕ ಬಳಿಕ ವಿವರವಾಗಿ ಪ್ರತಿಕ್ರಿಯಿಸುತ್ತೇನೆ ಎಂದರು.

